Download Our App

Follow us

Home » ಅಪರಾಧ » MLA ಟಿಕೇಟ್ ಕೊಡಿಸುವದಾಗಿ 7 ಕೋಟಿ ವಂಚನೆ ಆರೋಪ. ಚೈತ್ರಾ ಕುಂದಾಪುರ ಬಂಧನ.

MLA ಟಿಕೇಟ್ ಕೊಡಿಸುವದಾಗಿ 7 ಕೋಟಿ ವಂಚನೆ ಆರೋಪ. ಚೈತ್ರಾ ಕುಂದಾಪುರ ಬಂಧನ.

ಬೈಂದೂರಿನ ಬಿಜೆಪಿ ಮುಖಂಡ, ಸಮಾಜ ಸೇವಕರೋರ್ವರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು ಏಳು ಕೋಟಿ ರೂಪಾಯಿ ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಚೈತ್ರ ಕುಂದಾಪುರ ಎಂಬಾಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರಳನ್ನು ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಂಗಳವಾರ ರಾತ್ರಿ ಬೆಂಗಳೂರಿನ ಸಿಸಿಬಿ ಪೊಲೀಸರು ಸೀನಿಮಿಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಚೈತ್ರಾಳ ಜೊತೆ ಮತ್ತಿಬ್ಬರು ಆರೋಪಿಗಳನ್ನೂ ಸಹ ಸಿ ಸಿ ಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ವಘೋಷಿತ ಹಿಂದೂ ಸಂಘಟನೆಯ ನಾಯಕಿ, ಭಾಷಣಕಾರ್ತಿ, ಚೈತ್ರಾ ಕುಂದಾಪುರ ಮಾಡಿರುವ ವಂಚನೆ ಬಗ್ಗೆ ಬಿಜೆಪಿ ಮುಖಂಡ ಗೋವಿಂದಬಾಬು ಪೂಜಾರಿ ಬೆಂಗಳೂರಿನಲ್ಲಿ ದೂರು ನೀಡಿದ್ದರು. ಅದರಂತೆ ಮಂಗಳವಾರ ಬೆಂಗಳೂರಿನಿಂದ ಸಿಸಿಬಿ ಪೊಲೀಸರು ಉಡುಪಿಗೆ ಆಗಮಿಸಿ ಆಕೆಯನ್ನು ವಶಕ್ಕೆ ಪಡೆದಿದ್ದಾರೆ.

ಚೈತ್ರಾ ಕುಂದಾಪುರ ಜೊತೆಗೆ ಶ್ರೀಕಾಂತ್ ನಾಯಕ್ ಪೆಲತ್ತೂರು ನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಈ ವಂಚನೆ ಪ್ರಕರಣದಲ್ಲಿ ಈವರೆಗೆ ಗಗನ್ ಕಡೂರು, ಪ್ರಸಾದ್ ರನ್ನು ಈಗಾಗಲೇ ವಶಕ್ಕೆ ಪಡೆದಿದ್ದು ತನಿಖೆ ನಡೆಯುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!