Download Our App

Follow us

Home » ರಾಜಕೀಯ » ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಸಿದ್ದ. ಶಾಸಕ ಅರವಿಂದ ಬೆಲ್ಲದ ಚಾಲೆಂಜ್

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಸಿದ್ದ. ಶಾಸಕ ಅರವಿಂದ ಬೆಲ್ಲದ ಚಾಲೆಂಜ್

ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದ್ದಾರೆ. ಗಣೇಶ ಪ್ರತಿಷ್ಟಾಪನೆಗೆ ಅನುಮತಿ ಕೊಡುವಂತೆ ಆಗ್ರಹಿಸಿ ಬೆಲ್ಲದ,  ಪಾಲಿಕೆ ಸದಸ್ಯರು ಹಾಗೂ ಹಿಂದೂಪರ ಕಾರ್ಯಕರ್ತರ ಜೊತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ ಎಂದರು.

ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ ನೀಡಲು ಅವಕಾಶವಿದೆ. ಹೀಗಿದ್ದರೂ ಅನುಮತಿ ನೀಡಲು ಹಿಂದೇಟು ಹಾಕುತ್ತಿರುವುದು ಹಿಂದೂಗಳ ಭಾವನೆಗೆ ದಕ್ಕೆಯನ್ನುಂಟು ಮಾಡುತ್ತಿದೆ. ಇಂತಹ ಜನವಿರೋಧಿ ನೀತಿಯನ್ನು ಕೈ ಬಿಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅವಕಾಶ ಕೊಟ್ಟರೇ ಮಾಡುತ್ತೇವೆ. ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ತಿರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!