ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಯಾವುದೇ ತೊಂದರೆ ಇಲ್ಲದೆ ಗಣೇಶ ಪ್ರತಿಷ್ಠಾಪನೆ ಆಗಿದೆ. ನಾಳೆ ಈದ್ಧಾ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡ ಗಣೇಶ ವಿಸರ್ಜನೆ ನಡೆಯಲಿದ್ದು, 12 ಘಂಟಿಗೆ ಮೆರವಣಿಗೆ ಆರಂಭವಾಗಲಿದೆ ಎಂದು ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ. ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಅನೇಕ ನಾಯಕರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಬೆಲ್ಲದ ತಿಳಿಸಿದ್ದಾರೆ. ಸಿ ಟಿ ರವಿ ಕೂಡಾ ಬರುವ ನಿರೀಕ್ಷೆ ಇದ್ದು, ಸರ್ಕಾರ ಬಗ್ಗದೆ ಇರೋ ಕಾರಣಕ್ಕೆ ಹೋರಾಟ ಅನಿವಾರ್ಯವಾಗಿತ್ತು ಎಂದರು.
Author: Karnataka Files
Post Views: 1





