Download Our App

Follow us

Home » ಕಾನೂನು » ಚೈತ್ರಾ ವಂಚನೆ ಪ್ರಕರಣ, ವಜ್ರದೇಹಿ ಸ್ವಾಮೀಜಿಗೆ ಸಿ ಸಿ ಬಿ ಬುಲಾವ್

ಚೈತ್ರಾ ವಂಚನೆ ಪ್ರಕರಣ, ವಜ್ರದೇಹಿ ಸ್ವಾಮೀಜಿಗೆ ಸಿ ಸಿ ಬಿ ಬುಲಾವ್

ಬಿಜೆಪಿ ಟಿಕೇಟ್ ಕೊಡಿಸುವದಾಗಿ ಹೇಳಿ 5 ಕೋಟಿ ವಂಚನೆ ಮಾಡಿದ ಚೈತ್ರಾ & ಗ್ಯಾಂಗಿನ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನ ಸ್ವಾಮೀಜಿಯೊಬ್ಬರಿಗೆ ಬೆಂಗಳೂರಿನ ಸಿ ಸಿ ಬಿ ನೋಟಿಸ್ ಜಾರಿ ಮಾಡಿದೆ. ಮಂಗಳೂರಿನ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಿರುವ ಸಿ ಸಿ ಬಿ ವಿಚಾರಣೆಗೆ ಹಾಜರಾಗುವಂತೆ ಹೇಳಿದೆ. 5 ಕೋಟಿ ವಂಚಿಸಿ ಸಿಕ್ಕುಬಿದ್ದಿರುವ ವಂಚಕಿ ಚೈತ್ರಾ ಈ ಹಿಂದೆ ವಜ್ರದೇಹಿ ಸ್ವಾಮೀಜಿ ಹೆಸರು ಪ್ರಸ್ತಾಪ ಮಾಡಿದ್ದಳು ಎನ್ನಲಾಗಿದೆ. ಆದರೆ ವಜ್ರದೇಹಿ ಸ್ವಾಮೀಜಿ, ಚೈತ್ರಾ ಬಂಧನವಾಗುತ್ತಿದ್ದಂತೆ, ನನಗೂ ಚೈತ್ರಾಗೂ ಸಂಬಂಧವಿಲ್ಲ ಎಂದು ಹೇಳಿದ್ದರು. ಸಧ್ಯ ಈ ಪ್ರಕರಣ ಬಗೆದಷ್ಟು ಆಳಕ್ಕೆ ಇಳಿಯುತ್ತಿದ್ದು, ಪ್ರಕರಣ ಇದೀಗ ವಜ್ರದೇಹಿ ಸ್ವಾಮೀಜಿ ಬುಡಕ್ಕೆ ಬಂದಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!