ಇಸ್ರೇಲ್ ಹಾಗೂ ಫ್ಯಾಲೆಸ್ತೇನ್ ಹಮಾಸ್ ಉಗ್ರರ ನಡುವೆ ಯುದ್ಧ ನಡೆಯುತ್ತಿದ್ದು, ಇಸ್ರೇಲ್ ದೇಶದಲ್ಲಿ ಧಾರವಾಡದ ಸಹಾಯಕ ಪ್ರಾಧ್ಯಾಪಕರೊಬ್ಬರು ಸಿಲುಕಿಕೊಂಡಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಸುಮೇಶ್ ಎನ್ನುವವರು ಇಸ್ರೇಲ್ ದೇಶದ ಜೇರುಸೇಲಂ ನಗರದ ಹೆಬ್ರು ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿದ್ದ ಹವಾಮಾನ ಶಾಸ್ತ್ರ ಕುರಿತ ತರಬೇತಿಗೆ ತೆರಳಿದ್ದರು. ಆಗಸ್ಟ್ 7 ರಿಂದ ತರಬೇತಿ ಸಹ ಆರಂಭಗೊಂಡಿತ್ತು. ಈ ತರಬೇತಿ ಅಕ್ಟೋಬರ್ 22ರ ವರೆಗೆ ನಡೆಯಬೇಕಿತ್ತು. ಆದರೆ, ಅಲ್ಲಿ ಯುದ್ಧ ಆರಂಭವಾಗಿದ್ದರಿಂದ ತರಬೇತಿ ರದ್ದುಗೊಳಿಸಲಾಗಿದೆ. ಇದರಿಂದ ಧಾರವಾಡದ ಸಹಾಯಕ ಪ್ರಾಧ್ಯಾಪಕ ಸುಮೇಶ್ ಅವರು ಜೇರುಸೇಲಂನ ಲಾಡ್ಜ್ ಒಂದರಲ್ಲಿ ಉಳಿದುಕೊಂಡಿದ್ದಾರೆ. ಸುಮೇಶ ಸುರಕ್ಷಿತರಾಗಿದ್ದಾರೆ ಎನ್ನಲಾಗಿದೆ.
Author: Karnataka Files
Post Views: 7





