Download Our App

Follow us

Home » ಕಾನೂನು » ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಮೇಲೆ ಕಲ್ಲೆಸೆತ. ಸತ್ಯಮೂರ್ತಿ ಬಂಧನ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆ ಮೇಲೆ ಕಲ್ಲೆಸೆತ. ಸತ್ಯಮೂರ್ತಿ ಬಂಧನ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೈಸೂರಿನಲ್ಲಿರುವ ಮನೆ ಮೇಲೆ ಕಲ್ಲೆಸೆದ ಆರೋಪಿಯನ್ನು ಸರಸ್ವತಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸತ್ಯಮೂರ್ತಿ ಎಂದು ಗುರುತಿಸಲಾಗಿದೆ. ಸತ್ಯಮೂರ್ತಿ ನಿನ್ನೇ ಟಿ ಕೆ ಲೇಔಟ್ ನಲ್ಲಿರುವ ನಿವಾಸದ ಮೇಲೆ ಕಲ್ಲೆಸೆದು ಪರಾರಿಯಾಗಿದ್ದ. ತಕ್ಷಣ ಅಲರ್ಟ್ ಆದ ಪೊಲೀಸರು ಆರೋಪಿ ಸತ್ಯಮೂರ್ತಿಯನ್ನು ಬಂಧಿಸಿದ್ದಾರೆ. ಆರೋಪಿ ವಿರುದ್ದ 427 353 ಹಾಗೂ ಸೆಕ್ಷನ್ 504 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲು ಎಸೆದು ಮೈಸೂರು ಹೊರವಲಯದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಸರಸ್ವತಿಪುರಂ ಇನ್ಸಪೆಕ್ಟರ್ ರವೀಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿ ಸುಳಿವು ಪತ್ತೆ ಹಚ್ಚಿದ ಪೊಲೀಸರ ತಂಡ ವಶಕ್ಕೆ ಪಡೆಯಲು ಹೋದಾಗಲು ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ.

ಆರೋಪಿ ಸತ್ಯಮೂರ್ತಿ, ಸಬ್ ಇನ್ಸಪೆಕ್ಟರ್ ಮಹೇಂದ್ರ ಹಾಗೂ ಇತರ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಸಿನಿಮೀಯ ರೀತಿಯಲ್ಲಿ ಆರೋಪಿ  ಸತ್ಯಮೂರ್ತಿ  ಪೊಲೀಸರು ಬಂಧಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!