Download Our App

Follow us

Home » ಅಪರಾಧ » ಗದಗನಲ್ಲಿ ಹಾಡುಹಗಲೇ ಚಾಕು ಇರಿತ, ರಕ್ತದ ಮಡುವಿನಲ್ಲಿ ಬಿದ್ದ ಸುನೀಲ್

ಗದಗನಲ್ಲಿ ಹಾಡುಹಗಲೇ ಚಾಕು ಇರಿತ, ರಕ್ತದ ಮಡುವಿನಲ್ಲಿ ಬಿದ್ದ ಸುನೀಲ್

ಹಣಕಾಸು ಹಾಗೂ ವೈಯುಕ್ತಿಕ ವಿಚಾರಕ್ಕೆ ಸಂಬಂಧಿಸಿದಂತೆ ಗದಗನಲ್ಲಿ ವ್ಯಕ್ತಿಯೋರ್ವನಿಗೆ ಚಾಕು ಇರಿಯಲಾಗಿದೆ. ದೇವು ರಾಯಬಾಗಿ ಎಂಬಾತ, ಸುನೀಲ್ ಬಾಂಡಗೆ ಎಂಬುವವನಿಗೆ ಚಾಕು ಇರಿದಿದ್ದಾನೆ. ಜನನಿಬೀಡ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆತಂಕ ಸೃಷ್ಟಿಸಿದೆ. ಗಾಯಗೊಂಡ ಸುನೀಲ್ ಬಾಂಡಗೆಯನ್ನು ಜಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ. ಸುನೀಲ್ ಎಂಬುವವನಿಗೆ ದೇವು ಹತ್ತು ಸಾವಿರ ರೂಪಾಯಿ ಸಾಲ ಕೊಟ್ಟಿದ್ದ ಎನ್ನಲಾಗಿದೆ. ಬೇರೆಯವರ ಕಡೆಯಿಂದ ಹತ್ತು ಸಾವಿರ ಕೊಡಿಸಿದ್ದರಿಂದ ದೇವು ತಾನು ಕೊಟ್ಟ ಹಣ ಕೇಳಿದ್ದಾನೆ. ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ದೇವು ಎಂಬಾತ ಸುನೀಲ್ ನಿಗೆ ಚಾಕು ಹಾಕಿದ್ದಾನೆ. ಆರೋಪಿ ದೇವು ರಾಯಬಾಗಿ ಎಂಬುವವನನ್ನು ಪೊಲೀಸರು ಬಂಧಿಸಿದ್ದಾರೆ. ಸುನೀಲ್ ಬಾಂಡಗೆ ಎಂಬಾತನಿಗೆ ಹೊಟ್ಟೆ, ತಲೆ ಭಾಗಕ್ಕೆ ಗಾಯವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!