Download Our App

Follow us

Home » ಪ್ರಯಾಣ » ಬಸ್ ಮತ್ತು ಟಾಟಾ ಸುಮೋ ಅಪಘಾತ, ಸತ್ತವರ ಸಂಖ್ಯೆ 7 ಕ್ಕೆ ಏರಿಕೆ

ಬಸ್ ಮತ್ತು ಟಾಟಾ ಸುಮೋ ಅಪಘಾತ, ಸತ್ತವರ ಸಂಖ್ಯೆ 7 ಕ್ಕೆ ಏರಿಕೆ

ಗದಗ ಜಿಲ್ಲೆಯ ನರೇಗಲ್ ಬಳಿ ವಾಯುವ್ಯ ಸಾರಿಗೆ ಬಸ್ ಮತ್ತು ಟಾಟಾ ಸುಮೋ ನಡುವೆ ಸಂಭವಿಸಿದ ದುರಂತದಲ್ಲಿ ಸಾವಿನ ಸಂಖ್ಯೆ 7 ಕ್ಕೆ ಏರಿದೆ. ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ, ಇಬ್ಬರು ಗದಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಐದು ವರ್ಷದ ದಿಂಗಾಲೇಶ ಎಂಬ ಬಾಲಕಿದ್ದಾನೆ. ಇವರೆಲ್ಲ ಇಂದು ಬೆಳಿಗ್ಗೆ ಕಲಬುರ್ಗಿಯಿಂದ ಶಿರಹಟ್ಟಿಯ ಫಕಿರೇಶ್ವರ ಮಠಕ್ಕೆ ಟಾಟಾ ಸುಮೋ ವಾಹನದಲ್ಲಿ ಹೋಗುತ್ತಿದ್ದರು. ನರೇಗಲ್ ಬಳಿ ಬರುತ್ತಿದ್ದಂತೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರಂತ ಸಂಭವಿಸಿದೆ. ಗದಗ ಜಿಲ್ಲಾಸ್ಪತ್ರೆಯಲ್ಲಿ ಧಾಖಲಾದ ಗಾಯಾಳುಗಳನ್ನು ದಿಂಗಾಲೇಶ್ವರ ಶ್ರೀಗಳು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!