Download Our App

Follow us

Home » ಕ್ರೀಡೆ » ಟೆನಿಸ್ ಮೈದಾನದಲ್ಲಿ ಘಟಾನುಘಟಿ ರಾಜಕಾರಣಿಗಳ ಕಾಳಗ!

ಟೆನಿಸ್ ಮೈದಾನದಲ್ಲಿ ಘಟಾನುಘಟಿ ರಾಜಕಾರಣಿಗಳ ಕಾಳಗ!

ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ಟೆನಿಸ್ ಲೋಕ ಅನಾವರಣಗೊಂಡಿದೆ. ಪೇಡಾ ನಗರಿಯಲ್ಲಿ ಮೊದಲ ಬಾರಿಗೆ ಪುರುಷರ ಟೆನಿಸ್ ಸ್ಪರ್ಧೆ ಅಚ್ಚುಕಟ್ಟಾಗಿ ನಡೆದಿದೆ. 12 ದೇಶಗಳ ಟೆನಿಸ್ ಪಟುಗಳು ಧಾರವಾಡದಲ್ಲಿ ನಡೆದಿರುವ ಅಂತರರಾಷ್ಟ್ರೀಯ ಟೆನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ಧಾರವಾಡದಲ್ಲಿ ನಡೆದಿರುವ ಅಂತರರಾಷ್ಟ್ರೀಯ ಟೆನಿಸ್ ಸ್ಪರ್ಧೆ ಉದ್ಘಾಟನೆ ಮಾಡಲು ಬಂದಿದ್ದ ಭಾರತ ಕ್ರಿಕೇಟ್ ತಂಡದ ಮಾಜಿ ಕ್ಯಾಪ್ಟನ್ ಮೊಹಮ್ಮದ್ ಅಜರುದ್ದಿನ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ರಾಜಕೀಯ ಬದಿಗಿಟ್ಟು ಕೆಲಕಾಲ ಟೆನಿಸ್ ಆಡಿ ಗಮನ ಸೆಳೆದರು. ಸಂತೋಷ ಲಾಡ್ ಉತ್ತಮ ಕ್ರೀಡಾಪಟುವಾಗಿದ್ದು, ಮೊಹಮ್ಮದ ಅಜರುದ್ದಿನ ಸಹ ಕ್ರೀಡಾಪಟು ಆಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಇಬ್ಬರು ಒಂದೇ ಪಕ್ಷದಲ್ಲಿದ್ದು, ಸಂತೋಷ ಲಾಡ್ ಸಿದ್ದರಾಮಯ್ಯನವರ ಸಂಪುಟದಲ್ಲಿ ಸಚಿವರಾಗಿದ್ದರೆ, ಅಜರುದ್ದಿನ ತೆಲಂಗಾಣ ರಾಜ್ಯ ಕಾಂಗ್ರೇಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!