ಕಳೆದೊಂದು ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ಸಿಡಿಲಬ್ಬರದ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಸವದತ್ತಿ ಶಾಸಕ ವಿಶ್ವಾಸ ವೈಧ್ಯ ಹೇಳಿದ ಮಾತು, ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿ ಸಂಚಲನ ಮೂಡಿಸಿದೆ.
ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆಂದು ಸವದತ್ತಿ ಶಾಸಕ ವಿಶ್ವಾಸ ವೈಧ್ಯ, ವಿಶ್ವಾಸದ ಮಾತನ್ನಾಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುವ ಯೋಗ ಕೂಡಿ ಬಂದಿದ್ದು, ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಹಿರಂಗವಾಗಿ ಹೇಳಿದ್ದಾರೆ.
Author: Karnataka Files
Post Views: 4





