ಗುತ್ತಿಗೆದಾರ ಸಂತೋಷ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಿನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ಕು ಜನರಿಗೆ ಹೈಕೋರ್ಟ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಿದೆ. 2022 ರ ಎಪ್ರಿಲ್ 14 ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೇಸ್ ನಾಯಕರು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದರು.
ಈ ಸಂಬಂಧ ಹೈ ಗ್ರೌಂಡ್ಸ್ ಪೊಲೀಸರು ಕೇಸು ಧಾಖಲು ಮಾಡಿದ್ದರು. ಈ ಕೇಸಿಗೆ ಸಂಬಂಧಪಟ್ಟಂತೆ ವಿಚಾರಣಾ ಪ್ರಕ್ರಿಯೆ ರದ್ದು ಪಡಿಸುವಂತೆ ಅರ್ಜಿದಾರರು ಹೈಕೋರ್ಟ ಮೆಟ್ಟಲೇರಿದ್ದರು.
ಅರ್ಜಿದಾರರ ಮನವಿಯನ್ನು ತಿರಸ್ಕರಿದ ಹೈಕೋರ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಮ್ ಬಿ ಪಾಟೀಲ, ರಾಮಲಿಂಗಾರೆಡ್ಡಿ, ಎ ಐ ಸಿ ಸಿ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಅವರಿಗೆ ತಲಾ 10 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.
Author: Karnataka Files
Post Views: 3





