ಕರ್ನಾಟಕದಲ್ಲಿ ಯಾವದೇ ಅಡ್ಜಸ್ಟ್ಮೆಂಟ್ ರಾಜಕಾರಣ ಮಾಡದೆ ಪಕ್ಷ ಕಟ್ಟಿದರೆ, ಲೋಕಸಭೆ ಚುನಾವಣೆ ನಂತರ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಇರಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ನಾಯಕರಿಗೆ ಪಾಠ ಮಾಡಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ಬ್ರಷ್ಟಾಚಾರವನ್ನು ಪ್ರಶ್ನಿಸಿ ರಸ್ತೆಗೆ ಇಳಿಯಬೇಕು.
ರಾಜ್ಯ ಸರ್ಕಾರದ ಹಿಂದು ವಿರೋಧಿ ನೀತಿಯನ್ನು ವಿರೋಧಿಸಬೇಕು. ಹಿಂದುಗಳಿಗೆ ಅನ್ಯಾಯವಾದಾಗ ನಾವಿದ್ದೇವೆ ಎಂದು ಧ್ವನಿ ಎತ್ತಬೇಕು. ಹಾಗಾದಾಗ ಮಾತ್ರ ಬಿಜೆಪಿ ಕಟ್ಟಲು ಸಾಧ್ಯ ಎಂದು ತಪರಾಕಿ ನೀಡಿದ್ದಾರೆ.
Author: Karnataka Files
Post Views: 3





