ಮಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ನಡೆದ ರೈಲ್ ರೋಖೋ ಚಳುವಳಿಯಲ್ಲಿ ಭಾಗವಹಿಸಿದ ರೈತ ಹೋರಾಟಗಾರ ಕುತುಬುದ್ದಿನ ಖಾಜಿ ಬಂದನದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರ ನೇರ ಕೈವಾಡವಿದೆ ಎಂದು ಮಹಾದಾಯಿ ಹೋರಾಟಗಾರ ವಿರೇಶ ಸೊಬರದಮಠ ಆರೋಪಿಸಿದ್ದಾರೆ.
ರೈಲ್ ರೋಖೋ ಚಳುವಳಿಯಲ್ಲಿ ಭಾಗವಹಿಸಿದ್ದ 500 ರೈತರ ಮೇಲೆ ಕ್ರಿಮಿನಲ್ ಪ್ರಕರಣ ಧಾಖಲು ಮಾಡಿ, ರೈತ ಹೋರಾಟಗಾರರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋಶಿಯವರಿಗೆ ಮಹದಾಯಿ ಯೋಜನೆ ಜಾರಿ ಮಾಡುವುದರಲ್ಲಿ ಆಸಕ್ತಿ ಇಲ್ಲವಾದರು, ರೈತರನ್ನು ಜೈಲಿಗೆ ಕಳಿಸುವುದರಲ್ಲಿ ಆಸಕ್ತಿ ಹೆಚ್ಚಾಗಿದೆ ಎಂದು ಸೊಬರದಮಠ ಆರೋಪಿಸಿದ್ದಾರೆ.
Author: Karnataka Files
Post Views: 4





