Download Our App

Follow us

Home » ರಾಜಕೀಯ » ಚುನಾವಣೆ ಸಮಯದಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಎಂಟ್ರಿ. ಕುತೂಹಲಕ್ಕೆ ಕಾರಣವಾದ ನಾಳಿನ ಮಠಾಧೀಶರ ಸಭೆ.

ಚುನಾವಣೆ ಸಮಯದಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಎಂಟ್ರಿ. ಕುತೂಹಲಕ್ಕೆ ಕಾರಣವಾದ ನಾಳಿನ ಮಠಾಧೀಶರ ಸಭೆ.

ಲೋಕಸಭಾ ಕದನಕ್ಕೆ ದಿನಾಂಕ ನಿಗದಿಯಾಗುತ್ತಿದ್ದಂತೆ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಕುತೂಹಲಕಾರಿ ಬೆಳವಣಿಗೆಗಳು ನಡೆದಿವೆ. ಇಂದು ಹುಬ್ಬಳ್ಳಿಯಲ್ಲಿ  ನಡೆದ ಫಕೀರ ದಿಂಗಾಲೇಶ್ವರ ಸ್ವಾಮೀಜಿಯವರ ಪತ್ರಿಕಾಗೋಷ್ಟಿ ಸಾಕಷ್ಟು ವಿಚಾರಗಳನ್ನು ಹೊರಗೆಡುವಿದೆ. 

ನಾಳೆ ಬೆಳಿಗ್ಗೆ 9-30 ಕ್ಕೆ ಹುಬ್ಬಳ್ಳಿಯ ಮೂರುಸಾವಿರ ಮಠದ ಶಿವಾನುಭವ ಮಂಟಪದಲ್ಲಿ   ದಿಂಗಾಲೇಶ್ವರ ಸ್ವಾಮೀಜಿಯವರು ನಾಡಿನ ಮಠಾಧೀಶರ ಸಭೆ ನಡೆಸಲಿದ್ದಾರೆ. ಈ ಮಠಾಧೀಶರ ಸಭೆ ರಾಜ್ಯ ರಾಜಕಾರಣದಲ್ಲಿ  ಗಮನ ಸೆಳೆದಿದೆ.    ಈ ಸಭೆಗೆ ನಾಡಿನ ಸ್ವಾಮೀಜಿಗಳನ್ನು ಆಹ್ವಾನ ನೀಡಲಾಗಿದೆ ಎಂದು ಫಕೀರ ದಿಂಗಾಲೇಶ್ವರ ಸ್ವಾಮೀಜಿ ತಿಳಿಸಿದ್ದಾರೆ. ಸಭೆಯಲ್ಲಿ ವರ್ತಮಾನದಲ್ಲಿ ನಡೆದಿರುವ ಸಂಗತಿಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಒತ್ತಿ ಒತ್ತಿ ಹೇಳಿದ್ದು, ಕುತೂಹಲಕ್ಕೆ ಕಾರಣವಾಗಿದೆ. 

ಸಭೆಯಲ್ಲಿ ವರ್ತಮಾನದಲ್ಲಿ ಎದುರಾಗಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದ ಅವರು. ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಸ್ಯೆಗಳ ಬಗ್ಗೆ ಪ್ರಮುಖ ಚರ್ಚೆ ನಡೆಯಲಿದೆ ಎಂದು  ತಿಳಿಸಿದ್ದು, ನಾಳಿನ ಮಠಾಧೀಶರ ಸಭೆ ಕುತೂಹಲ ಮೂಡಿಸಿದೆ.

 

Karnataka Files
Author: Karnataka Files

Leave a Comment

RELATED LATEST NEWS

Top Headlines

ನಾನು ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು. ಮಿಲಾಪಿ ಕುಸ್ತಿಗೆ ಸಾಕ್ಷಿಯಾಯ್ತೆ ಇಂದಿನ ಹೋರಾಟ

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಕರೆ ಕೊಟ್ಟಿದ್ದ “ಬೃಹತ್” ಹೆಸರಿನ ಪ್ರತಿಭಟನೆ, ನಾ ಚೂಟಿದಂಗ್ ಮಾಡ್ತೀನಿ, ನೀ ಅತ್ತಂಗ್ ಮಾಡು ಅನ್ನೋ ಲೆಕ್ಕದಲ್ಲಿ

Live Cricket

error: Content is protected !!