Download Our App

Follow us

Home » ರಾಜಕೀಯ » ಜೋಶಿಯವರ ಮತ್ತೊಂದು ಕೊಡುಗೆ. ಶೀಘ್ರದಲ್ಲೇ ಹುಬ್ಬಳ್ಳಿ ಪುಣೆ ನಡುವೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭ.

ಜೋಶಿಯವರ ಮತ್ತೊಂದು ಕೊಡುಗೆ. ಶೀಘ್ರದಲ್ಲೇ ಹುಬ್ಬಳ್ಳಿ ಪುಣೆ ನಡುವೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಆರಂಭ.

ಕೇಂದ್ರದ ಪ್ರಭಾವಿ ಸಚಿವ ಪ್ರಲ್ಲಾದ ಜೋಶಿ ಕ್ಷೇತ್ರದ ಜನರಿಗೆ ಮತ್ತೊಂದು ಕೊಡುಗೆ ನೀಡಿದ್ದಾರೆ. 

ಶೀಘ್ರದಲ್ಲಿ ಹುಬ್ಬಳ್ಳಿ ಮತ್ತು ಪುಣೆ ನಡುವೆ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದೆ. ಇದಕ್ಕೆ ರೈಲ್ವೇ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿ-ಪುಣೆ ಸಂಪರ್ಕವು ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ, ಇದು ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಹೇಳಿರುವ ಪ್ರಲ್ಲಾದ ಜೋಶಿ, ಈ ಸಂಬಂಧ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಜುಲೈನಲ್ಲಿ ಪತ್ರದ ಮೂಲಕ ಮನವಿ ಮಾಡಿದ್ದರು. 

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಜೋಶಿಯವರ ಮನವಿಗೆ ಸ್ಪಂಧಿಸಿದ್ದು, ಜೋಶಿ ಕ್ಷೇತ್ರದ ಜನರ ಬೇಡಿಕೆ ಈಡೇರಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!