Download Our App

Follow us

Home » ರಾಜಕೀಯ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಆಕ್ರೋಶ ಶಮನಗೊಂಡಿದೆ. 

ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರರನ್ನು ಭೇಟಿ ಮಾಡಿದ್ದ ಖಾದ್ರಿಯವರನ್ನು ಮನವೊಲಿಸಲಾಗಿದೆ. 

ಸಚಿವ ಜಮೀರ್ ಅಹ್ಮದ್ ಖಾನ್ ಸಮ್ಮುಖದಲ್ಲಿ ಖಾದ್ರಿಯವರ ಜೊತೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಸುಧೀರ್ಘ ಚರ್ಚೆ ನಡೆಸಿ, ನಾಮಪತ್ರ ವಾಪಸ್ ಪಡೆಯುವಂತೆ ಹೇಳಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಮನವೊಲಿಸಿದ ನಂತರ ಪಕ್ಷ ಹೇಳಿದಂತೆ ನಡೆದುಕೊಳ್ಳುವದಾಗಿ ಖಾದ್ರಿ ಹೇಳಿದ್ದು, ನಾಳೆ ಬೆಂಬಲಿಗರ ಸಭೆ ಕರೆದಿದ್ದಾರೆ. 

ಶಿಗ್ಗಾವ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಅಜ್ಜಂಪೀರ ಖಾದ್ರಿಯವರಿಗೆ ಎಂ ಎಲ್ ಸಿ ಸ್ಥಾನ ಒಲಿದು ಬರಲಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ ಅವರ ಸಮ್ಮುಖದಲ್ಲಿಯೇ ಈ ಚರ್ಚೆ ನಡೆದಿದೆ ಎನ್ನಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!