ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಕೇಂದ್ರ ಸಚಿವ, ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳರ ಮೇಲೆ ದೂರು ಧಾಖಲಿಸಲಾಗಿದೆ.
ಯತ್ನಾಳ್ ಅವರನ್ನು ಈ ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಂಚೂಣಿ ಸ್ವಾತಂತ್ರ್ಯ ಹೋರಾಟಗಾರ, ಹಿರಿಯ ಕಾಂಗ್ರೆಸ್ ನಾಯಕ, ದೇಶದ ಮೊದಲ ಪ್ರಧಾನಿಗಳಾದ ಜವಾಹರ ಲಾಲ್ ನೆಹರು ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ‘ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ’ ಅವರನ್ನು ಕೊಲ್ಲಿಸಿದ್ದು ನೆಹರೂ ಎನ್ನುವ ಮೂಲಕ ಯತ್ನಾಳ್ ಅಕ್ಷಮ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
Author: Karnataka Files
Post Views: 1





