ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ಕಾರ್ಯ ನಡೆಯುತ್ತಿದ್ದು, ದಸರಾ ರಜೆಯನ್ನು ಮತ್ತಷ್ಟು ದಿನಗಳ ಕಾಲ ಮುಂದೂಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ಮಾಡಿಕೊಂಡಿದೆ ಎನ್ನಲಾಗಿದೆ.
ಶಿಕ್ಷಕರು ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದು, ಸರ್ಕಾರ ನಿಗದಿ ಮಾಡಿದಂತೆ ಇಂದು ಸಮೀಕ್ಷಾ ಕಾರ್ಯ ಮುಕ್ತಾಯವಾಗಬೇಕಿತ್ತು.
ಸಮೀಕ್ಷೆ ಸಂದರ್ಭದಲ್ಲಿ ಕೆಲವು ಕಡೆಗೆ ತಾಂತ್ರಿಕ ಸಮಸ್ಯೆ ಎದುರಾಗಿದ್ದರ ಪರಿಣಾಮ ತಡವಾಗಿದೆ ಎನ್ನಲಾಗಿದೆ.
ರಜೆಯನ್ನು ಅಕ್ಟೋಬರ್ 17 ರ ವರೆಗೆ ವಿಸ್ತರಿಸಬೇಕೆಂದು ಸಂಘ ಮನವಿ ಮಾಡಿದೆ ಎನ್ನಲಾಗಿದೆ. ದಸರಾ ರಜೆ ವಿಸ್ತರಿಸುವ ಸಾಧ್ಯತೆ ಬಗ್ಗೆ ಇನ್ನಷ್ಟೇ ಅಧಿಕೃತ ಹೇಳಿಕೆ ಸರ್ಕಾರದಿಂದ ಬರಬೇಕಿದೆ.
Author: Karnataka Files
Post Views: 14





