ವಿಜಯಪುರದಲ್ಲಿ ನಿನ್ನೆ ತಡರಾತ್ರಿ ಕೃಷ್ಣ ಪ್ಯಾಲೇಸ್ ಹೋಟೆಲ್ ಮುಂಭಾಗಕ್ಕೆ ಬೆಂಕಿ ತಗುಲಿದ ಪರಿಣಾಮ, ಹೋಟೆಲ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಸೋಲಾಪುರ ರಸ್ತೆಯಲ್ಲಿರುವ ಕೃಷ್ಣ ಪ್ಯಾಲೇಸ್ ನಲ್ಲಿ ಈ ಅಗ್ನಿ ಅಪಘಡ ನಡೆದಿದೆ. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಾರ್ಟ್ ಸರ್ಕಿಟ್ ಕಾರಣದಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.
Author: Karnataka Files
Post Views: 249





