ನಿನ್ನೆ ನವದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರು, ಕುಸುಗಲ್ ರಸ್ತೆ ( ಹುಬ್ಬಳ್ಳಿ) ಯಿಂದ ನರೇಂದ್ರ ( ಧಾರವಾಡ) ಹೊಸ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡುವಂತೆ ವಿನಂತಿಸಿದರು.

ಬರುವ ವಾರ್ಷಿಕ ಯೋಜನೆ ಅಡಿ ಈ ಕಾಮಗಾರಿಯನ್ನು ಅನುಮೋದಿಸಲು ವಿನಂತಿಸಿದರು. ಇದೇ ಸಂದರ್ಭದಲ್ಲಿ ನವಲಗುಂದ ಬೈಪಾಸ ರಸ್ತೆಗೆ ಕೇಂದ್ರ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು ಇದನ್ನೂ NHAI – ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಹಿಸಿದ್ದು ಆದಷ್ಟು ಬೇಗನೆ NHAI ದಿಂದ DPR – ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಲು ಟೆಂಡರ್ ಕರಿಯುವಂತೆ ವಿನಂತಿಸಿದರು.
ರಾಜ್ಯಸರ್ಕಾರದಿಂದ ರಸ್ತೆ ನಿರ್ಮಾಣಕ್ಕೆ ಭೂಮಿ ದೊರೆತ ನಂತರ ತಕ್ಷಣವೇ ಕಾರ್ಯ ಆರಂಭವಾಗಲಿದೆ ಎಂದು ಗಡ್ಕರಿಯವರು ತಿಳಿಸಿದ್ದಾರೆ.
Author: Karnataka Files
Post Views: 366





