Download Our App

Follow us

Home » ರಾಜಕೀಯ » ಜನೇವರಿ 22 ರಂದು ಜಂಟಿ ಅಧಿವೇಶನ

ಜನೇವರಿ 22 ರಂದು ಜಂಟಿ ಅಧಿವೇಶನ

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಾಯಿಸಿದ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಲು ಇದೇ ದಿನಾಂಕ 22 ರಂದು ವಿಧಾನ ಮಂಡಳದ ಜಂಟಿ ಅಧಿವೇಶನ ಕರೆಯಲಾಗಿದೆ ಎಂದು ಕಾನೂನು ಸಚಿವ ಎಚ್ ಕೆ ಪಾಟೀಲ ತಿಳಿಸಿದ್ದಾರೆ.

ಸಚಿವ ಸಂಪುಟದ ತೀರ್ಮಾನ ಪ್ರಕಟಿಸಿದ ಅವರು ಅಂದು ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಅನುಮೋದಿಸಲು ಮುಖ್ಯಮಂತ್ರಿಗಳಿಗೆ ಪರಮಾಧಿಕಾರ ನೀಡಲಾಗಿದೆ ಎಂದು ತಿಳಿಸಿದರು.

ನರೇಗಾ ಯೋಜನೆಗೆ ವಿಬಿ ಜಿ ರಾಮ ಜಿ ಎಂದು ಹೆಸರಿಟ್ಟು ಕೇಂದ್ರ ಸರ್ಕಾರ ಯಡವಿದ್ದು, ಈ ಬಗ್ಗೆ ಚರ್ಚೆ ನಡೆಯಲಿದೆ. 

 

Karnataka Files
Author: Karnataka Files

Leave a Comment

RELATED LATEST NEWS

error: Content is protected !!