Download Our App

Follow us

Home » ಕರ್ನಾಟಕ » ಧಾರವಾಡ : ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಪ್ರೊಫೆಸರ್ ಉಷಾ ಮೂರ್ತಿ ಇನ್ನಿಲ್ಲ

ಧಾರವಾಡ : ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಪ್ರೊಫೆಸರ್ ಉಷಾ ಮೂರ್ತಿ ಇನ್ನಿಲ್ಲ

ಧಾರವಾಡದ ಕರ್ನಾಟಕ ಕಾಲೇಜಿನ ಪ್ರಾಂಶುಪಾಲರಾಗಿ, ಸಾವಿರಾರು ವಿದ್ಯಾರ್ಥಿಗಳ ನೆಚ್ಚಿನ ಪ್ರೊಫೆಸರ್ ಆಗಿದ್ದ ಉಷಾ ಮೂರ್ತಿಯವರು ಇಂದು ನಿಧನರಾಗಿದ್ದಾರೆ.

1994 ರ ಅವಧಿಯಲ್ಲಿ ಅವರು ಕರ್ನಾಟಕ ಕಾಲೇಜಿನ ಪ್ರಾಂಶುಪಾಲರಾಗಿದ್ದರು.

ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ.

ತಮ್ಮ ಕೊನೆಯುಸಿರು ಇರುವವರೆಗೂ ಉಷಾ ಮೂರ್ತಿಯವರು, ಯೂನಿವರ್ಶಿಟಿ ಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಜಕೀಯ ಶಾಸ್ತ್ರ ಭೋಧನೆ ಮಾಡುತ್ತಿದ್ದರು.

ಧಾರವಾಡದ ಸಪ್ತಾಪುರ 1 ನೇ ಕ್ರಾಸನಲ್ಲಿರುವ ಅವರ ಮನೆಯಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 8 ಘಂಟೆಯವರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅವರ ಶಿಷ್ಯವರ್ಗ ತಿಳಿಸಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!