ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿಯವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರನ್ನು ಭೇಟಿ ಮಾಡಿದರು.
ಧಾರವಾಡ ತಾಲೂಕಿನ ಮರೆವಾಡ ಗ್ರಾಮದ ಮಸೂತಿ ಜೀರ್ಣೋದ್ಧಾರ ಹಾಗೂ ಮುಂದುವರೆದ ಕಾಮಗಾರಿಗೆ ಮಂಜೂರಾತಿ ಪಡೆಯುವಲ್ಲಿ ಯಶಸ್ವಿಯಾದರು.
ಇದೇ ವೇಳೆ ಹೆಬ್ಬಳ್ಳಿ ಗ್ರಾಮದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಸಚಿವರಲ್ಲಿ ಮನವಿ ಸಲ್ಲಿಸಲಾಯಿತು. ಇದಕ್ಕೆ ಸ್ಪಂದಿಸಿದ ಸಚಿವರು, ಬೇಡಿಕೆಗೆ ಒಪ್ಪಿಗೆ ಸೂಚಿಸಿ ಕಡತಗಳಿಗೆ ಸಹಿ ಹಾಕಿದರು.
ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅನುದಾನ ತರುವಲ್ಲಿ ಶಾಸಕ ವಿನಯ ಕುಲಕರ್ಣಿಯವರು ಮುಂದಾಗಿದ್ದಾರೆ.
Author: Karnataka Files
Post Views: 559





