Download Our App

Follow us

Home » ಕಾನೂನು » ಅವೈಜ್ಞಾನಿಕ ನೀರಿನ ಬಿಲ್ಲಿನ ವಿರುದ್ದ ಶಾಸಕ ವಿನಯ ಕುಲಕರ್ಣಿ ಆಕ್ರೋಶ : ಬಡ್ಡಿ ಮನ್ನಾ ಮಾಡಲು ಸೂಚನೆ

ಅವೈಜ್ಞಾನಿಕ ನೀರಿನ ಬಿಲ್ಲಿನ ವಿರುದ್ದ ಶಾಸಕ ವಿನಯ ಕುಲಕರ್ಣಿ ಆಕ್ರೋಶ : ಬಡ್ಡಿ ಮನ್ನಾ ಮಾಡಲು ಸೂಚನೆ

ಹುಬ್ಬಳ್ಳಿಧಾರವಾಡ ಅವಳಿ ನಗರದ ಕುಡಿಯುವ ನೀರಿನ ನಿರ್ವಹಣೆಯ ಹೊಣೆಯನ್ನು ಎಲ್ ಆಂಡ್ ಟಿ ಕಂಪನಿಗೆ ವಹಿಸಲಾಗಿದ್ದು, ಗ್ರಾಹಕರಿಗೆ ಅವೈಜ್ಞಾನಿಕವಾಗಿ ನೀರಿನ ಬಿಲ್ಲುಗಳನ್ನು ನೀಡುತ್ತಿರುವ ಬಗ್ಗೆ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಗತಿ ಪರಿಶೀಲನಾ ಸಭೆಯಲ್ಲಿವಿಷಯವನ್ನು ಪ್ರಸ್ತಾಪಿಸಿದ ಅವರು, ಸಕಾಲಕ್ಕೆ ನೀರಿನ ಕರ ಪಾವತಿಸದ ಗ್ರಾಹಕರ ಮೇಲೆ ಹೆಚ್ಚಿನ ಬಡ್ಡಿ ವಿಧಿಸಲಾಗುತ್ತಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನೀರಿನ ಕರದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದ ಶಾಸಕ ವಿನಯ ಕುಲಕರ್ಣಿ, ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.

ಅಲ್ಲದೆಧಾರವಾಡ ನಗರದ ಜನತೆಗೆ ಸಮರ್ಪಕ ಹಾಗೂ ನಿರಂತರವಾಗಿ ಕುಡಿಯುವ ನೀರು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿಮ್ಮ ಮುಂದಿನ ಪಯಣ ಮತ್ತಷ್ಟು ಯಶಸ್ವಿಯಾಗಲಿ

ಎನ್ ಶಶಿಕುಮಾರ ಹುಬ್ಬಳ್ಳಿಗೆ ಕಮಿಷನರ್ ಆಗಿ ಬಂದಂತ ಸಮಯದಲ್ಲಿ ಅನೇಕ ಸವಾಲುಗಳು ಅವರ ಬೆನ್ನಿಗೇರಿದ್ದವು.  ಅವರ ಬಗ್ಗೆ, ಅವರ ಕೆಲಸದ ಸ್ಟೈಲ್ ಬಗ್ಗೆ, ಅವರು ಅಧಿಕಾರ ಸ್ವೀಕರಿಸುವದಕ್ಕೂ

Live Cricket

error: Content is protected !!