Download Our App

Follow us

Home » ಕಾನೂನು » ದಲಿತ ಮುಖಂಡನ ಮೇಲೆ ಹಲ್ಲೆ : PSI ಅಮಾನತು

ದಲಿತ ಮುಖಂಡನ ಮೇಲೆ ಹಲ್ಲೆ : PSI ಅಮಾನತು

ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲಿನ ಹಲ್ಲೆ ಮುಂದುವರೆದಿದ್ದು, ನಿನ್ನೆ ಪಿಎಸ್ಐ ಗುರುರಾಜ್, ದಲಿತ ಮುಖಂಡ ಗಾಳೆಪ್ಪ ಹಿರೇಮನಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ.

ಅತ್ಯಂತ ಕೀಳು ನಿಂದನೆಯಿಂದ ಹಲ್ಲೆ ನಡೆಸಿ, “ನೀವು ದಲಿತರು 500 ರೂಪಾಯಿಗೆ ಕೀಳು ಕೆಲಸ ಮಾಡುತ್ತೀರಿ; ನಾನು ನಿಮ್ಮಿಂದ ಕಲಿಯಬೇಕಾಗಿಲ್ಲ” ಎಂದು ಜಾತಿ ನಿಂದನೆ ಮಾಡಿದ್ದರ ಪರಿಣಾಮ, ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

ಈ ವಿಷಯಕ್ಕೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲೆಯ ಕುಕನೂರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ (PSI) ಗುರುರಾಜ ಅವರನ್ನು ಪೊಲೀಸ್ ವರಿಷ್ಠಾಧಿಕಾರಿಗಳ ಆದೇಶದ ಮೇರೆಗೆ ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!