Download Our App

Follow us

Home » ಕಾನೂನು » ಈಗ ಫೋನ್ ಕರೆಗಳ ಮೂಲಕ ಬೈಯುತ್ತಿದ್ದಾರೆ. ಮುಂದೆ RSS ನವರು ನಿಮ್ಮ ಮನೆಗೂ ನುಗ್ಗಬಹುದು : ಪ್ರಿಯಾಂಕ್ ಖರ್ಗೆಗೆ ಎಚ್ಚರಿಸಿದ ಮಣಿಕಂಠ ರಾಠೋಡ್

ಈಗ ಫೋನ್ ಕರೆಗಳ ಮೂಲಕ ಬೈಯುತ್ತಿದ್ದಾರೆ. ಮುಂದೆ RSS ನವರು ನಿಮ್ಮ ಮನೆಗೂ ನುಗ್ಗಬಹುದು : ಪ್ರಿಯಾಂಕ್ ಖರ್ಗೆಗೆ ಎಚ್ಚರಿಸಿದ ಮಣಿಕಂಠ ರಾಠೋಡ್

ಚಿತ್ತಾಪುರ ಕ್ಷೇತ್ರದ ಪರಾಜಿತ ಬಿಜೆಪಿ ಅಭ್ಯರ್ಥಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆಯವರ ರಾಜಕೀಯ ಬದ್ದ ವೈರಿ, ಮಣಿಕಂಠ ರಾಠೋಡ್ ಪ್ರಿಯಾಂಕ್ ಖರ್ಗೆಯವರನ್ನು ಎಚ್ಚರಿಸಿದ್ದಾರೆ.

ಕಲಬುರ್ಗಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಮಣಿಕಂಠ ರಾಠೋಡ್, ಈಗ ಕೇವಲ ಫೋನ್ ಮಾಡಿ ಬೈಯುತ್ತಿದ್ದಾರೆ. ಮುಂದೆ ಒಂದು ದಿನ RSS ನವರು ನಿಮ್ಮ ಮನೆಗೂ ನುಗ್ಗಬಹುದು ಎಂದು ಪ್ರಿಯಾಂಕ್ ಖರ್ಗೆಯವರನ್ನು ಎಚ್ಚರಿಸಿದ್ದಾರೆ. 

ಇತ್ತೀಚಿಗೆ ಪ್ರಿಯಾಂಕ್ ಖರ್ಗೆಯವರು, ಸರ್ಕಾರಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆ ಬಗ್ಗೆ ಹೇಳಿಕೆ ನೀಡಿದ್ದರು.

ಇದರ ಬೆನ್ನಲ್ಲೇ ಮಣಿಕಂಠ ರಾಠೋಡ್ ಅವರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಮಣಿಕಂಠ ರಾಠೋಡ್ ಮಾತನಾಡಿರುವ ವಿಡಿಯೋ ತುಣುಕನ್ನು ಪ್ರಿಯಾಂಕ್ ಖರ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಬಿಜೆಪಿ ನಾಯಕರನ್ನು ಪ್ರಶ್ನಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!