ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಕುಟುಂಬದ ವಿರುದ್ಧ ಅವರ ಮೊಮ್ಮಗನ ಪತ್ನಿ ಹಲವಾರು ಗಂಭೀರ ಆರೋಪಗಳನ್ನು ಮಾಡಿದ್ದಾಳೆ.
ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ಈ ಸುದ್ದಿ ಬಿತ್ತರವಾಗಿದೆ. ಥಾವರ್ಚಂದ್ ಗೆಹ್ಲೋಟ್ ಮೊಮ್ಮಗ ದೇವೇಂದ್ರ ಗೆಹ್ಲೋಟ್ ಅವರ ಪತ್ನಿ ದಿವ್ಯಾ ಗೆಹ್ಲೋಟ್ ಅವರು ಮಧ್ಯಪ್ರದೇಶದ ರತ್ಲಂನಲ್ಲಿ ಎಸ್ಪಿಯನ್ನು ಭೇಟಿಯಾಗಿ ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಿದ್ದಾರೆ.
ದಿವ್ಯಾ ತನ್ನ ಅತ್ತೆಯ ಮನೆಗೆ ಬಂದಾಗ, ತನ್ನ ಪತಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನಿಯಾಗಿದ್ದಾನೆ ಮತ್ತು ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾನೆಂದು ಆರೋಪಿಸಿದ್ದು, ತನಗೆ ದೈಹಿಕ ಹಿಂಸೆ, ಮಾನಸಿಕ ಹಿಂಸೆ ಮತ್ತು ವರದಕ್ಷಿಣೆಗಾಗಿ ಪದೇ ಪದೇ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
Author: Karnataka Files
Post Views: 515





