Download Our App

Follow us

Home » ಕಾನೂನು » ಧಾರವಾಡ ಜಿಲ್ಲೆಯಲ್ಲಿ ನಡೆದ ಸಾಮಾಜಿಕ ಸಮೀಕ್ಷೆ ಕಾರ್ಯಕ್ಕೆ 7 ಕೋಟಿ ಖರ್ಚು

ಧಾರವಾಡ ಜಿಲ್ಲೆಯಲ್ಲಿ ನಡೆದ ಸಾಮಾಜಿಕ ಸಮೀಕ್ಷೆ ಕಾರ್ಯಕ್ಕೆ 7 ಕೋಟಿ ಖರ್ಚು

ಧಾರವಾಡ ಜಿಲ್ಲೆಯಲ್ಲಿ ನಡೆದ ಸಾಮಾಜಿಕ ಸಮೀಕ್ಷಾ ಕಾರ್ಯ ಮುಗಿದಿದ್ದು, 24 ಲಕ್ಷ ಕುಟುಂಬಗಳ ಪೈಕಿ 21 ಲಕ್ಷ ಕುಟುಂಬಗಳ ಸಮೀಕ್ಧೆ ಪೂರ್ಣಗೊಂಡಿದೆ ಎನ್ನಲಾಗಿದೆ. 

ಸಮೀಕ್ಷಾ ಕಾರ್ಯದಲ್ಲಿ ತೊಡಗಿದ್ದ ಗಣತಿದಾರರಿಗೆ ಹಿಂದುಳಿದ ವರ್ಗಗಳ ಇಲಾಖೆಯಿಂದ ಗೌರವ ಧನ,  ಭತ್ಯೆ ಸೇರಿದಂತೆ 7 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.

ಹುಬ್ಬಳ್ಳಿ ಧಾರವಾಡ ಹೊರತು ಪಡಿಸಿ ನವಲಗುಂದ, ಕುಂದಗೋಳ, ಕಲಘಟಗಿ, ಅಳ್ನಾವರ, ಅಣ್ಣಿಗೇರಿ ತಾಲೂಕಿನಲ್ಲಿನ ಗಣತಿದಾರರಿಗೆ ಭತ್ಯೆ ಬಿಡುಗಡೆ ಮಾಡಲಾಗಿದೆ.

ಪ್ರತಿಯೊಬ್ಬರಿಗೆ ತಲಾ 5 ಸಾವಿರ ರೂಪಾಯಿ ಗೌರವ ಧನ ಹಾಗೂ ಕುಟುಂಬದಲ್ಲಿ ಇಬ್ಬರ ಸಮೀಕ್ಷೆ ನಡೆಸಿದರೆ 50 ರೂಪಾಯಿ, ಮತ್ತು ಮೂರಕ್ಕಿಂತ ಹೆಚ್ಚಿಗೆ ಜನರ ಸಮೀಕ್ಷೆ ನಡೆಸಿದರೆ ನೂರು ರೂಪಾಯಿ ಲೆಕ್ಕದಲ್ಲಿ ಗಣತಿದಾರರ ಖಾತೆಗೆ ಹಣ ಜಮಾ ಮಾಡಲಾಗಿದೆ. 

ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 20 ರ ವರೆಗೆ ಧಾರವಾಡ ಜಿಲ್ಲೆಯಲ್ಲಿ ನಡೆದ ಸಮೀಕ್ಷೆಯಲ್ಲಿ ಒಟ್ಟು 4400 ಗಣತಿದಾರರು ತೊಡಗಿಕೊಂಡಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರಕ್ಕೆ ಶಾಕೀರ ಸನದಿ ಮುಂದುವರಿಕೆ

ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಶಾಕೀರ ಸನದಿಯವರನ್ನು ಮುಂದುವರೆಸಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಹುಡಾ ಜೊತೆ ಗದಗ, ಹಾವೇರಿ, ಬೆಳಗಾವಿ

Live Cricket

error: Content is protected !!