ಕರ್ನಾಟಕ ಆರೋಗ್ಯ ಇಲಾಖೆಯು ಪಾರಿವಾಳಗಳಿಗೆ ಆಹಾರ ನೀಡುವ ನಿಯಮಗಳನ್ನು ಹೊರಡಿಸಿದೆ:
ಸಾರ್ವಜನಿಕ ಪ್ರದೇಶಗಳಲ್ಲಿ ಅನಿಯಂತ್ರಿತವಾಗಿ ಆಹಾರ ನೀಡುವುದರಿಂದ ಉಸಿರಾಟದ ಕಾಯಿಲೆಗಳು ಸೇರಿದಂತೆ ಆರೋಗ್ಯದ ಅಪಾಯಗಳು ಉಂಟಾಗುತ್ತಿವೆ ಎಂಬ ಭಯಾನಕ ಅಂಶ ಪತ್ತೆಯಾಗಿದೆ.
ಅಧಿಕಾರಿಗಳು ಸಾರ್ವಜನಿಕವಾಗಿ ಆಹಾರ ನೀಡುವುದನ್ನು ನಿಷೇಧಿಸಬೇಕು, ಸರ್ಕಾರೇತರ ಸಂಸ್ಥೆಗಳು ನಿರ್ವಹಿಸುವ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಅದನ್ನು ಅನುಮತಿಸಬೇಕು ಮತ್ತು ಸಮಯವನ್ನು ಮಿತಿಗೊಳಿಸಬೇಕು ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರಿ ಆದೇಶ ಉಲ್ಲಂಘನೆ ಮಾಡುವವರ ವಿರುದ್ಧ ದಂಡವನ್ನು ಜಾರಿಗೊಳಿಸಬೇಕು ಮತ್ತು ಜಾಗೃತಿ ಅಭಿಯಾನಗಳನ್ನು ನಡೆಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ನಗರಾಭಿವೃದ್ಧಿ ಇಲಾಖೆಯು ಎಲ್ಲಾ ಪುರಸಭೆಗಳಿಗೆ ಹಾಗೂ ಸ್ಥಳೀಯ ಸಂಸ್ಥೆಗಳಿಗೆ, ನಿಗಮಗಳಿಗೆ ತಕ್ಷಣವೇ ಈ ಆದೇಶ ಜಾರಿಗೆ ತರಲು ನಿರ್ದೇಶಿಸಿದೆ.
Author: Karnataka Files
Post Views: 306





