ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆ ಇನ್ಸಪೆಕ್ಟರ್ ಡಾ. ಜ್ಯೋತಿರ್ಲಿಂಗ ಚಂದ್ರಾಮ ಹೊನಕಟ್ಟಿ ಅವರಿಗೆ ಜಾನಪದ ಕ್ಷೇತ್ರದ ಸೇವೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹರಳಯ್ಯನಹಟ್ಟಿ ಗ್ರಾಮದವರಾದ ಅವರು ಬಿಎಸ್ಸಿ, ಎಂಎ ಪೂರ್ಣಗೊಳಿಸಿ ಗೌರವ ಡಾಕ್ಟರೇಟ್ ಪಡೆದಿದ್ದಾರೆ.
ಜಾನಪದ ಗಾಯಕರಾಗಿಯೂ, ಅನೇಕ ಜಾನಪದ ಕೃತಿಗಳ ಮೂಲಕವೂ ಹೆಸರು ಪಡೆದಿರುವ ಅವರು, 23 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಸಧ್ಯ ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಅವರು ಇನ್ಸಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
Author: Karnataka Files
Post Views: 139





