ಧಾರವಾಡದಲ್ಲಿ ಇದ್ದ ಆಧಾರ ಸೇವಾ ಕೇಂದ್ರವನ್ನು ಹುಬ್ಬಳ್ಳಿಗೆ ಶಿಫ್ಟ್ ಮಾಡಲಾಗಿದೆ.
ಸಿಂಧೂರ ಹಾಲ್ ಪಕ್ಕದ ಕಟ್ಟಡದಲ್ಲಿ ಇದ್ದ ಆಧಾರ ಸೇವಾ ಕೇಂದ್ರವನ್ನು ಯಾವ ಕಾರಣಕ್ಕೆ ಹುಬ್ಬಳ್ಳಿಗೆ ಶಿಫ್ಟ್ ಮಾಡಲಾಗಿದೆ ಎಂಬುದು ಗೊತ್ತಾಗುತ್ತಿಲ್ಲ.
ಆಧಾರ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿ ಸೇರಿದಂತೆ ಅನೇಕ ಕೆಲಸಗಳಿಗೆ ಆಧಾರವಾಗಿದ್ದ ಆಧಾರ ಸೇವಾ ಕೇಂದ್ರವನ್ನು ಹುಬ್ಬಳ್ಳಿಯಲ್ಲಿ ಶಿಫ್ಟ್ ಮಾಡಲಾಗಿದ್ದು, ಜನರಿಗೆ ತೊಂದರೆಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಬಸವರಾಜ ಜಾಧವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Author: Karnataka Files
Post Views: 337





