ಧಾರವಾಡದ ಕೋಳಿ ಕೆರೆ ಪ್ರದೇಶದಲ್ಲಿ ನಡೆದ ಅಗ್ನಿ ಅವಘಡ ಘಟನೆ ಮಾಸುವ ಮುನ್ನವೇ ಮತ್ತೊಂದು ಅಗ್ನಿ ಅವಘಡ ನಡೆದಿದೆ.

ಧಾರವಾಡದ ಮಣಿಕಂಠ ನಗರದಲ್ಲಿ ಓಮ್ನಿ ಕಾರಿನಲ್ಲಿದ್ದ ಸಿಲೆಂಡರ್ ಸ್ಫೋಟಗೊಂಡ ಪರಿಣಾಮ ಓರ್ವನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

ಪ್ರಕರಣ ಶಹರ ಠಾಣೆಯಲ್ಲಿ ದಾಖಲಾಗಿದೆ.

Author: Karnataka Files
Post Views: 556





