ಶಿವಮೊಗ್ಗ ಸಂಸದ, ಬಿ ವೈ ರಾಘವೇಂದ್ರ ಅವರು ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುವ ಮಾರ್ಗದ ಮಧ್ಯದಲ್ಲಿ ಅವರಿದ್ದ ಕಾರು ಅಪಘಾತಕ್ಕೀಡಾಗಿದೆ.
ನನಗೆ ನೀಡಲಾಗಿರುವ ಸರ್ಕಾರಿ ವಾಹನವು ಅಪಘಾತಕ್ಕೆ ಈಡಾಗಿದ್ದು, ನನಗೆ ಯಾವುದೇ ತೊಂದರೆ ಆಗಿಲ್ಲ. ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಕ್ಷೇಮವಾಗಿದ್ದೇನೆ ಎಂದು ರಾಘವೇಂದ್ರ ತಿಳಿಸಿದ್ದಾರೆ.
ಹಿಂಬದಿಯಿಂದ ಬರುತ್ತಿದ್ದ ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ ಎನ್ನಲಾಗಿದೆ.
Author: Karnataka Files
Post Views: 1,252





