ಹುಬ್ಬಳ್ಳಿ ಧಾರವಾಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಅಧ್ಯಕ್ಷರ ನೇಮಕಕ್ಕೆ ಲಾಭಿ ತೀವ್ರಗೊಂಡಿದೆ. ಹಾಲಿ ಅಧ್ಯಕ್ಷ ಶಾಕೀರ ಸನದಿಯವರ ಖುರ್ಚಿಗೆ ಈಗ ಹಲವರು ಟವೆಲ್ ಹಾಕಿದ್ದಾರೆ.
ಪ್ರಾಧಿಕಾರದ ಅಧ್ಯಕ್ಷ ಪಟ್ಟಕ್ಕಾಗಿ ಕಾಂಗ್ರೇಸ್ಸಿನಲ್ಲಿ ಹತ್ತಕ್ಕೂ ಹೆಚ್ಚು ಜನ ಅಕಾಂಕ್ಷಿಗಳಿದ್ದಾರೆ. ಅನೀಲ ಪಾಟೀಲ, ಅಲ್ತಾಫ್ ಹಳ್ಳೂರು, ರಾಜಶೇಖರ ಮೆಣಸಿನಕಾಯಿ, ಬಂಗಾರೇಶ ಹಿರೇಮಠ, ಧಾರವಾಡದ ರಾಬರ್ಟ ದದ್ದಾಪುರಿ, ವಸಂತ ಅರ್ಕಾಚಾರಿ ಸೇರಿದಂತೆ ಹಲವು ಮುಖಂಡರು ಪ್ರಯತ್ನ ನಡೆಸಿದ್ದಾರೆ.
ಮತ್ತೊಂದೆಡೆ ಈ ಸಲ ಹುಬ್ಬಳ್ಳಿ ಧಾರವಾಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ದಲಿತರಿಗೆ ಕೊಡಬೇಕು ಅನ್ನೋ ಕೂಗು ಕೇಳಿ ಬರುತ್ತಿದೆ.
ಕಾಂಗ್ರೇಸ್ಸಿನ ನಿಷ್ಟಾವಂತ ಕಾರ್ಯಕರ್ತರಾಗಿರುವ ಪರಮೇಶ್ವರ ಕಾಳೆಯವರನ್ನು ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಮಾಡುವಂತೆ ಅಹಿಂದ ಸಂಘಟನೆಗಳು ಆಗ್ರಹಿಸಿವೆ.
Author: Karnataka Files
Post Views: 774





