ಇಂದು ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ರೈತರ ಆದಾಯವನ್ನು ದ್ವಿಗುಣಗೊಳಿಸುವ ಅವರ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕುಂದಗೋಳ ಶಾಸಕ ಎಮ್ ಆರ್ ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.
ಕೈಗಾರಿಕೆಗಳ ಅಭಿವೃದ್ಧಿಗಾಗಿ ವಿದೇಶಿ ಬಂಡವಾಳವನ್ನು ಆಕರ್ಷಿಸಲು ಕ್ರಮ ಕೈಗೊಳ್ಳಲಾಗಿದೆ, ದಿನದಿಂದ ದಿನಕ್ಕೆ ನಗರಗಳಲ್ಲಿ ಜನಸಂಖ್ಯೆ ಹೆಚ್ಚಾಗುತ್ತಿದೆ ಇದನ್ನು ಗಮನದಲ್ಲಿಟ್ಟುಕೊಂಡು ಮೂಲಭೂತ ಸೌಕರ್ಯಗಳ ಒದಗಿಸುವಿಕೆ, ರೈಲ್ವೆ ಸಂಪರ್ಕ, ರಸ್ತೆಗಳ ನಿರ್ಮಾಣ ಇವುಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಜನಸಾಮಾನ್ಯರ ದೈನಂದಿನ ಜೀವನ ಸುಲಭವಾಗುವಂತೆ ಯೋಜನೆ ರೂಪಿಸಲಾಗಿದೆ ಎಂದು ಎಮ್.ಆರ್.ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ.
Author: Karnataka Files
Post Views: 65





