ಧಾರವಾಡದ ಹೈಕೋರ್ಟ್ ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ ಬೆದರಿಕೆಯ ಸಂದೇಶ ಬಂದಿದ್ದು, ಅವಳಿ ನಗರದ ಪೊಲೀಸರು ಅಲರ್ಟ್ ಆಗಿದ್ದಾರೆ.
ಇಂದು ಬೆಳಿಗ್ಗೆ 11 ರ ಸುಮಾರಿಗೆ ಇ ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದೆ ಎನ್ನಲಾಗಿದ್ದು, ಕೋರ್ಟ್ ಕಾರ್ಯ ಕಲಾಪಗಳನ್ನು ಸ್ಥಗಿತಗೊಳಿಸಲಾಗಿದೆ.
ಪೊಲೀಸರು ಹಾಗೂ ಬಾಂಬ್ ನಿಗ್ರಹ ದಳ, ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡವನ್ನು ಸುತ್ತುವರೆದಿದ್ದಾರೆ.
ಶೋಧ ಕಾರ್ಯ ಮುಂದುವರೆದಿದ್ದು , ನ್ಯಾಯಾಧೀಶರು, ಸೇರಿದಂತೆ ಸಿಬ್ಬಂದಿ ಮತ್ತು ವಕೀಲರನ್ನು ಹೊರಗೆ ಕಳಿಸಲಾಗಿದೆ.
Author: Karnataka Files
Post Views: 550





