ದೇಶದಲ್ಲಿ ದೊಡ್ಡ ಸುದ್ದಿ ಮಾಡಿದ್ದ ವಿದೇಶಿ ಮಹಿಳೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಜೆಎಮ್ ಎಫ್ ಸಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಮರಣ ದಂಡನೆ ವಿಧಿಸಿ ಆದೇಶ ನೀಡಿದೆ.
ಮಾರ್ಚ್ 6, 2025 ರಂದು ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ಇಸ್ರೇಲಿ ಮಹಿಳಾ ಪ್ರವಾಸಿ ಮತ್ತು ಆಕೆಯ ಭಾರತೀಯ ಸ್ನೇಹಿತನ ಮೇಲೆ ನಡೆದ ಕ್ರೂರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ ತೀರ್ಪು ಬಂದಿದೆ.
ಕರ್ನಾಟಕದ ಗಂಗಾವತಿ ಜೆಎಂಎಫ್ಸಿ ನ್ಯಾಯಾಲಯವು ಮಲ್ಲೇಶ್ ಹಂಡಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಸಾಕ್ಷ್ಯಗಳು ಮತ್ತು ಸಾಕ್ಷಿಗಳ ಸಮಗ್ರ ಮಾಹಿತಿ ಪರಿಶೀಲಿಸಿದ ನಂತರ ನ್ಯಾಯಾಲಯವು, ಭಯಾನಕ ಅಪರಾಧದಲ್ಲಿ ಭಾಗಿಯಾಗಿದ್ದಕ್ಕಾಗಿ ಮೂವರು ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಿದೆ.
Author: Karnataka Files
Post Views: 780





