ಕೊಲೆ ಪ್ರಕರಣದಲ್ಲಿ ಜನಪ್ರತಿನಿದಿಗಳ ನ್ಯಾಯಾಲಯದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರು ತೀರ್ಪಿಗೆ ತಡೆಯಾಜ್ಞೆ ಕೋರಿ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.
ವಿನಯ ಕುಲಕರ್ಣಿ ಸೇರಿದಂತೆ 16 ಜನರಿಗೆ ಜನಪ್ರತಿನಿದಿನಗಳ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟ ಮಾಡಿದೆ. ಶಾಸಕ ಸ್ಥಾನ ಕಳೆದುಕೊಳ್ಳುವ ಕಾರಣ, ಶಿಕ್ಷೆಗೆ ಕೂಡಲೇ ತಡೆಯಾಜ್ಞೆ ನೀಡುವಂತೆ ಕೋರಿದ್ದಾರೆ.
ವಿನಯ ಕುಲಕರ್ಣಿ ಹಾಗೂ ಚಂದ್ರಶೇಖರ ಇಂಡಿಯವರು ಹೈಕೋರ್ಟ್ ಮೆಟ್ಟಲೇರಿದ್ದು, ಅರ್ಜಿಯ ವಿಚಾರಣೆ ಏಪ್ರಿಲ್ 27 ಕ್ಕೆ ಬರಲಿದೆ ಎನ್ನಲಾಗಿದೆ.
Author: Karnataka Files
Post Views: 325




