ಧಾರವಾಡ ಮಹಾನಗರ ಪಾಲಿಕೆಗೆ ಆಗ್ರಹಿಸಿ, ಧಾರವಾಡದಲ್ಲಿ ನಡೆಯುತ್ತಿರುವ ಸತ್ಯ ಪ್ರತಿಪಾದನಾ ಹೋರಾಟ ಎರಡನೇ ದಿನಕ್ಕೆ ಕಾಲಿಟ್ಟಿದೆ.
ಪಕ್ಷಾತೀತವಾಗಿ ಹೋರಾಟ ನಡೆಯುತ್ತಿದ್ದು, ಬಿಜೆಪಿ ಹೊರತು ಪಡಿಸಿ ಕಾಂಗ್ರೇಸ್ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ಹೋರಾಟದಲ್ಲಿ ಭಾಗವಹಿಸಿದ್ದಾರೆ.
ಎರಡನೇ ದಿನವಾದ ಇಂದು ವಿನಯ ಕುಲಕರ್ಣಿಯವರ ಮಗ ಹೇಮಂತ ಮತ್ತು ಮಗಳು ವೈಶಾಲಿ ಹೋರಾಟದಲ್ಲಿ ಭಾಗವಹಿಸಿದ್ದಾರೆ.
ಮಾಜಿ ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಹೈಕೋರ್ಟ್ ಪೀಠ ಹೋರಾಟದ ರೂವಾರಿ ಬಿ ಡಿ ಹಿರೇಮಠ, ಹಿರಿಯ ನಾಯಕ ಮಹಾದೇವ ಹೊರಟ್ಟಿ, ಜೆಡಿಎಸ್ ನಾಯಕ ಗುರುರಾಜ ಹುಣಸಿಮರದ, ಕಾಂಗ್ರೇಸ್ ನಾಯಕರಾದ ಈಶ್ವರ ಶಿವಳ್ಳಿ, ಅರವಿಂದ ಏಗನಗೌಡರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಪಧಾಧಿಕಾರಿಗಳು ಭಾಗವಹಿಸಿದ್ದಾರೆ.
Author: Karnataka Files
Post Views: 541





