ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಬಹುದಿನಗಳ ಮಹಾದಾಯಿ ಹೋರಾಟ ಸಧ್ಯ ನಿಲ್ಲುವ ಹಾಗೆ ಕಾಣ್ತಿಲ್ಲ. ಮಹಾದಾಯಿ ಕುರಿತು ಇಂದು ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಸರ್ಕಾರ ಮಹಾದಾಯಿ ಯೋಜನೆ ಅನುಷ್ಟಾನಗೊಳಿಸಲು ಸಿದ್ದವಿದೆ. ಆದರೆ ಕೇಂದ್ರ ಸರ್ಕಾರ ಅರಣ್ಯ ಮತ್ತು ಪರಿಸರ ತೆರವು ಕುರಿತು ನಿರ್ಧಾರ ತೆಗೆದುಕೊಳ್ಳದೆ ಇರೋ ಕಾರಣ ಹಿನ್ನೆಡೆಯಾಗಿದೆ ಎಂದ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಯೋಜನೆಗೆ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ಹಸಿರು ನಿಶಾನೆ ಸಿಕ್ಕ ಕೊಡಲೇ ಕಾಮಗಾರಿ ಆರಂಭ ಮಾಡ್ತೀವಿ ಎಂದು ಹೇಳಿದರು.
ಮತ್ತೊಂದೆಡೆ ಕಳೆದ ವಾರ ಹುಬ್ಬಳ್ಳಿಯಲ್ಲಿ ಮಹಾದಾಯಿ ಕುರಿತು ಮಾತನಾಡಿದ್ದ ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರಾಜ್ಯ ಸರ್ಕಾರ ವನ್ಯಜೀವಿ ಕುರಿತು ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು. ಮಹಾದಾಯಿ ಯೋಜನೆಗೆ ತೊಡಕಾಗಿದ್ದ ಎಲ್ಲಾ ಕೆಲಸಗಳು ಮುಗಿದಿವೆ ಎಂದು ಹೇಳಿದ ಬೆನ್ನಲ್ಲೇ ಇಂದು ಸಿದ್ದರಾಮಯ್ಯ ಮತ್ತೆ ಕೇಂದ್ರದ ಕಡೆ ಕೈ ಮಾಡಿದ್ದಾರೆ. ಅರಣ್ಯ ಮತ್ತು ಪರಿಸರ ಕುರಿತು ಗ್ರೀನ್ ಸಿಗ್ನಲ್ ಸಿಕ್ಕರೆ ಮಹಾದಾಯಿ ಯೋಜನೆ ಅನುಷ್ಠಾನಗೊಳ್ಳಲಿದೆ. ಮಹಾದಾಯಿ ವಿಷಯದಲ್ಲಿ ಕೇಂದ್ರ ಸಚಿವ ಜೋಶಿ ರೈತರ ದಾರಿ ತಪ್ಪಿಸಿದ್ರಾ ಅನ್ನೋ ಮಾತು ಕೇಳಿ ಬರುತ್ತಿವೆ.





