ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಘೋರ ದುರಂತದಿಂದ ಎಚ್ಚೆತ್ತುಕೊಂಡಿರುವ ಸರ್ಕಾರ, ಪಟಾಕಿಗಳ ಮೇಲೆ ಬಿಗಿ ಕ್ರಮ ಕೈಗೊಂಡಿದೆ. ಅತ್ತಿಬೆಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 13 ಜನ ಪ್ರಾಣ ಕಳೆದುಕೊಂಡಿದ್ದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಕೇವಲ ಹಸಿರು ಪಟಾಕಿಗ ಬಳಕೆಗೆ ಮಾತ್ರ ಅವಕಾಶ ನೀಡಿದೆ.
ಸಭೆ ಸಮಾರಂಭ, ಸಮಾವೇಶಗಳಲ್ಲಿ ಅಪಾಯಕಾರಿ ಪಟಾಕಿ ಮೇಲೆ ಬಳಸದಂತೆ ಕಟ್ಟಪ್ಪಣೆ ಹೊರಡಿಸಿದೆ. ರಾಜ್ಯದಲ್ಲಿ ಪಟಾಕಿ ಮಳಿಗೆ, ಮತ್ತು ದಾಸ್ತಾನು ಮಳಿಗೆಗಳಿಗೆ 5 ವರ್ಷದ ಪರವಾನಿಗೆ ನೀಡಲಾಗುತ್ತಿತ್ತು. ಅದನ್ನು ಈಗ ಒಂದೆ ವರ್ಷಕ್ಕೆ ಪರವಾನಿಗೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನುಗಳನ್ನು ಮೀರಿ ಪರವಾನಿಗೆ ನೀಡಿದರೆ, ಕ್ರಮ ಕೈಗೊಳ್ಳಲಾಗುವದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ತಿಳಿಸಿದ್ದಾರೆ.
Author: Karnataka Files
Post Views: 9





