ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿ ಕಳೆದ ಒಂದು ತಿಂಗಳಿನಿಂದ ನಡೆದಿದ್ದ ಆಂತರಿಕ ಕಿತ್ತಾಟಕ್ಕೆ ಇಂದು ಬ್ರೇಕ್ ಬಿತ್ತು. ಮಹತ್ವದ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ನಿರ್ಮಾಣಗೊಂಡ ನೂತನ ಸಭಾಭವನವನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರರಿಂದ ಉದ್ಘಾಟನೆ ಮಾಡಿಸಿದರು.

ಸಮಾರಂಭದಲ್ಲಿ ಸಚಿವ ಸಂಪುಟದ ಬಹುತೇಕ ಸಚಿವರು ಮತ್ತು ಶಾಸಕರು ಭಾಗವಹಿಸಿದ್ದರು. ಸಭಾಭವನ ಉದ್ಘಾಟನೆಯಾದ ಬಳಿಕ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಿದರು. ಮುಖ್ಯಮಂತ್ರಿ ಹಾಗೂ ಸಚಿವರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುತ್ತಾ ಗೊಂದಲ ಸೃಷ್ಟಿಯಾಗಿದ್ದರ ಪರಿಣಾಮ ಇಂದು ನಡೆದ ಸಭೆ ಒಗ್ಗಟ್ಟು ಪ್ರದರ್ಶಿಸಿತು.

Author: Karnataka Files
Post Views: 6





