Download Our App

Follow us

Home » ಅಪರಾಧ » ಕಾರ್‌ಗೆ ಪ್ರೆಸ್ ಅಂತಾ ಬರೆಸಿ ಅಕ್ರಮ ಮದ್ಯ ಸಾಗಾಟ -ಆರೋಪಿ ಜೈಲಿಗೆ

ಕಾರ್‌ಗೆ ಪ್ರೆಸ್ ಅಂತಾ ಬರೆಸಿ ಅಕ್ರಮ ಮದ್ಯ ಸಾಗಾಟ -ಆರೋಪಿ ಜೈಲಿಗೆ

ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಅಕ್ರಮವಾಗಿ ಬೇರೆ ರಾಜ್ಯದಿಂದ ಸಾರಾಯಿ ತಂದು ಮಾರಾಟ ಮಾಡುತ್ತಿದ್ದ ಖತರ್ನಾಕ್ ಆಸಾಮಿಯನ್ನು ಹುಬ್ಬಳ್ಳಿಯ ಸಿಸಿಬಿ ಪೊಲೀಸರು ಜೈಲಿಗೆ ಕಳುಹಿಸಿದ್ದಾರೆ.

ವೃತ್ತಿಯಲ್ಲಿ ಕಾರು ಚಾಲಕನಾಗಿದ್ದ ವಿಶ್ವೇಶ್ವರ ನಗರದ ಶ್ರೀಕಾಂತಯ್ಯ ಹಿರೇಮಠ ಎಂಬಾತ ತನ್ನ ಎಲ್ಲೋ ಬೋರ್ಡ್ ಕಾರ್ ಮೇಲೆ ಪ್ರೆಸ್ ಅಂತಾ ಬರೆಯಿಸಿ ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ತಂದು ನಗರದಲ್ಲಿ ಮಾರಾಟ ಮಾಡುವ ಕಾಯಕವನ್ನು ನಡೆಸಿದ್ದ.‌

ಈ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ ಸಿಸಿಬಿ ಇನ್ಸೆಕ್ಟರ್ ಗುಳಾರಿ ನೇತೃತ್ವದ ತಂಡ ಶ್ರೀಕಾಂತಯ್ಯ ದೇಶಪಾಂಡೆ ನಗರದ ಗುಜರಾತ್ ಭವನದ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದಾಗ ದಾಳಿ ಮಾಡಿ ಕಾರ್‌ನಲ್ಲಿ ಗೋವಾ ರಾಜ್ಯದ 35 ಲೀಟರ್ ಅಕ್ರಮ ಮದ್ಯ ಪತ್ತೆಯಾಗಿದೆ. ಈ ಹಿನ್ನೆಲೆ ಕಾರ್ ಹಾಗೂ ಸಾಗಾಟ ಮಾಡಲು ಬಳಸುತ್ತಿದ್ದ ಕಾರನ್ನು ಸೀಜ್ ಮಾಡಿ ಆರೋಪಿಯನ್ನು ಜೈಲಿಗೆ ಅಟ್ಟಿದ್ದಾರೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಭಯ ಹುಟ್ಟಿಸುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣ

ಕರ್ನಾಟಕದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಹೆಣ್ಣುಮಕ್ಕಳ ನಾಪತ್ತೆ ಪ್ರಕರಣಗಳು ಭಯ ಹುಟ್ಟಿಸಿವೆ.  ಕರ್ನಾಟಕದಲ್ಲಿ ಕಳೆದ ಆರು ವರ್ಷಗಳ ಅವಧಿಯಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಹೆಣ್ಣುಮಕ್ಕಳು ನಾಪತ್ತೆಯಾಗಿದ್ದಾರೆ.  ಇತ್ತೀಚಿನ

Live Cricket

error: Content is protected !!