ಬಿಜೆಪಿ ಫೈರ್ ಬ್ರಾಂಡ್ ಬಸನಗೌಡ ಪಾಟೀಲ ಯತ್ನಾಳರ ಕನಸು ಭಗ್ನಗೊಂಡಿದೆ. ವಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಯತ್ನಾಳರು ಕೊತ ಕೊತ ಕುದಿಯುತ್ತಿದ್ದಾರೆ. ಒಂದೆಡೆ ಅಧ್ಯಕ್ಷ ಸ್ಥಾನ, ಮತ್ತೊಂದೆಡೆ ವಿಪಕ್ಷ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಬಸನಗೌಡ ಪಾಟೀಲ ಯತ್ನಾಳ ನವೆಂಬರ್ 10 ರ ನಂತರ ಟ್ವಿಟ್ ನಲ್ಲಿ ಸದ್ದು ಮಾಡಿದ್ದಾರೆ.
# ನ ದೈನ್ಯಂ ನ ಪಲಾಯನಂ #
ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅಸಮಾಧಾನಗೊಂಡು ಪಕ್ಷದ ಎಲ್ಲಿಯೂ ಕಾಣಿಸಿಕೊಳ್ಳದ ಪ್ರಖರ ಹಿಂದುತ್ವವಾದಿ ಯತ್ನಾಳ, ಇಂದು ನಡೆದ ರಾಜಕೀಯ ಬೆಳವಣಿಗೆ ಹಿನ್ನೇಲೆಯಲ್ಲಿ ” ನ ದೈನ್ಯಂ ನ ಪಲಾಯನಂ” ಎಂಬ ಮಾತನ್ನು ಮಾರ್ಮಿಕವಾಗಿ ಹೇಳಿದ್ದಾರೆ. ಇದರ ಅರ್ಥ,
ಒಬ್ಬ ಯೋಧ ಯಾವುದಕ್ಕೂ ಜಗ್ಗೋ ಮಾತಿಲ್ಲ. ಅಥವಾ ವಿಷಾದಿಸಲು ಸಾಧ್ಯವಿಲ್ಲ. ಅವನ ಜೀವನ, ಅಂತ್ಯವಿಲ್ಲದ ಸವಾಲು, ಮತ್ತು ಸವಾಲುಗಳು ಬಹುಶಃ ಒಳ್ಳೆಯದು ಅಥವಾ ಕೆಟ್ಟದ್ದಲ್ಲ. ಸವಾಲುಗಳು ಕೇವಲ ಸವಾಲುಗಳಾಗಿವೆ ಎಂದು ಟ್ವಿಟ್ ಮಾಡಿದ್ದಾರೆ.
Author: Karnataka Files
Post Views: 6





