Download Our App

Follow us

Home » ರಾಜಕೀಯ » ಪಂಚಮಸಾಲಿ ಮೀಸಲಾತಿ. ಸಿಡಿದೆದ್ದ ಜಯ ಮೃತ್ಯುಂಜಯ ಸ್ವಾಮೀಜಿ. 13 ಕ್ಕೆ ಬೃಹತ್ ಹೋರಾಟಕ್ಕೆ ಕರೆ

ಪಂಚಮಸಾಲಿ ಮೀಸಲಾತಿ. ಸಿಡಿದೆದ್ದ ಜಯ ಮೃತ್ಯುಂಜಯ ಸ್ವಾಮೀಜಿ. 13 ಕ್ಕೆ ಬೃಹತ್ ಹೋರಾಟಕ್ಕೆ ಕರೆ

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಬೆಳಗಾವಿ ಮತ್ತೊಮ್ಮೆ ಅಣಿಯಾಗುತ್ತಿದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗೆ ಆಗ್ರಹಿಸಿ ಕಳೆದೆರೆಡು ವರ್ಷಗಳಿಂದ ನಡೆದಿರುವ ಹೋರಾಟ ಇಂದಿಗೂ ಮುಂದುವರೆದಿದೆ.

ಕೂಡಲಸಂಗಮದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆದಿರುವ ಹೋರಾಟಕ್ಕೆ ಸರ್ಕಾರ ಮಣೆಯದಿರುವದು ಸ್ವಾಮೀಜಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 13 ರಂದು ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದಿಂದ ಸುವರ್ಣಸೌಧದ ವರೆಗೆ ಪಾದಯಾತ್ರೆ ನಡೆಸಲು ಜಯ ಮೃತ್ಯುಂಜಯ ಸ್ವಾಮೀಜಿ ಕರೆ ಕೊಟ್ಟಿದ್ದಾರೆ. ಮುಖ್ಯಮಂತ್ರಿಗಳು ಅಧಿವೇಶನದ ನಂತರ ಈ ಬಗ್ಗೆ ಚರ್ಚೆ ಮಾಡುವದಾಗಿ ಹೇಳಿದ್ದು, ನಮಗೆ ಸಮಾಧಾನ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮೀಸಲಾತಿ ಕೊಡದೆ ಹೋದರೆ, ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಪಕ್ಷಕ್ಕೆ ಸಮುದಾಯದ ಜನ ತಕ್ಕ ಶಾಸ್ತಿ ಮಾಡಲಿದ್ದಾರೆಂದು ಎಚ್ಚರಿಕೆ ನೀಡಿದರು. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಕಿಟಲ್ ಕಾಲೇಜಿನ ಹ್ಯಾಂಡ್ ಸಮ್, ಕೋಲಾರ ಸರ್ ಇನ್ನಿಲ್ಲ

ಅಪಾರ ಶಿಷ್ಯ ಬಳಗ ಹೊಂದಿದ್ದ ಧಾರವಾಡ ಕಿಟಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ಸಂಪತರಾಜ ಕೋಲಾರ ತಮ್ಮ 83 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರೀಯೆ ದಿನಾಂಕ 08-03-2026 ರಂದು

Live Cricket

error: Content is protected !!