ಮುಖ್ಯಮಂತ್ರಿಗಳೊಂದಿಗೆ ಮುನಿಸಿಕೊಂಡಿದ್ದ ದಾವಣಗೆರೆ ಧಣಿ ಶಾಮನೂರ ಶಿವಶಂಕರಪ್ಪ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಜಾತಿ ಜನಗಣತಿ ಸಮೀಕ್ಷಾ ವರದಿ ಅವೈಜ್ಞಾನಿಕವಾಗಿದ್ದು, ಜಾತಿ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡದಂತೆ ಆಗ್ರಹಿಸಿದರು.
ಲಿಂಗಾಯತ ಅಧಿಕಾರಿಗಳಿಗೆ ಆಯಕಟ್ಟಿನ ಸ್ಥಾನ ನೀಡುತ್ತಿಲ್ಲ ಮತ್ತು ಲಿಂಗಾಯತ ಸಮುದಾಯವನ್ನು ನಿರ್ಲಕ್ಷ ಮಾಡಲಾಗುತ್ತಿದೆ ಎಂದು ಶಾಮನೂರು ಬಹಿರಂಗವಾಗಿ ಆರೋಪಿಸಿದ್ದರು. ಅಲ್ಲದೆ ಜಾತಿ ಜನಗಣತಿ ಸಮೀಕ್ಷೆಗೆ ಸಂಬಂಧಿಸಿದಂತೆ ಶಾಮನೂರು ಅಪಸ್ವರ ಹೊರಹಾಕಿದ್ದರು. ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಮನೂರು ಅವರಿಗೆ ಬಿಜೆಪಿ ಹಾಗೂ ಕಾಂಗ್ರೇಸ್ಸಿನ ಲಿಂಗಾಯತ ಶಾಸಕರು ಸಾಥ ನೀಡಿದರು.
Author: Karnataka Files
Post Views: 4





