ಕರ್ನಾಟಕದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಪಣ ತೊಟ್ಟಿರುವ ಕಾಂಗ್ರೇಸ್ ಹೈಕಮಾಂಡ ನಾಳೆ ಮಹತ್ವದ ಸಭೆ ಕರೆದಿದೆ. ದೆಹಲಿಗೆ ಬರುವಂತೆ ಲೋಕಸಭಾ ಚುನಾವಣೆ ಜವಾಬ್ದಾರಿ ಹೊತ್ತ 28 ಸಚಿವರಿಗೆ ದೆಹಲಿಗೆ ಬರುವಂತೆ ಹೇಳಿದೆ.
ರಾಜ್ಯದಲ್ಲಿ ಈಗಾಗಲೇ ಆಯಾ ಲೋಕಸಭಾ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾಗಬೇಕು ಎಂಬುದರ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಕೇಳಿರುವ ಸಚಿವರು, ಹೈಕಮಾಂಡ ನಡೆಸುವ ಸಭೆಯಲ್ಲಿ ಹೇಳಲಿದ್ದಾರೆ ಎನ್ನಲಾಗಿದೆ. ಲೋಕಸಭಾ ಕ್ಷೇತ್ರಗಳಲ್ಲಿ ಟಿಕೇಟಗಾಗಿ ಪೈಪೋಟಿ ಇದ್ದು, ಜಾತಿ ಲೆಕ್ಕಾಚಾರದ ಮೇಲೆ ಸಮರ್ಥರನ್ನು ಆಯ್ಕೆ ಮಾಡಲು ಚರ್ಚೆ ನಡೆಸಲಾಗುತ್ತಿದೆ.
ನಾಳೆ ನಡೆಯಲಿರುವ ಹೈ ವೋಲ್ಟೇಜ್ ಸಭೆಯಲ್ಲಿ ಭಾಗವಹಿಸುವಂತೆ ಸಚಿವರಿಗೆ ಆಹ್ವಾನ ಬಂದಿದ್ದು, ಆದಷ್ಟು ಶೀಘ್ರದಲ್ಲಿ ಅಭ್ಯರ್ಥಿ ಘೋಷಣೆ ಮಾಡುವ ನಿಟ್ಟಿನಲ್ಲಿ ಹೈಕಮಾಂಡ ಉತ್ಸುಕವಾಗಿದೆ. ಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಟರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ, ಸುರ್ಜಿವಾಲಾ ಪಾಲ್ಗೊಳ್ಳಲಿದ್ದಾರೆ.





