ಚಿತ್ರನಟ ಉಪೇಂದ್ರ ನೇತೃತ್ವದ ಪ್ರಜಾಕೀಯ ಪಕ್ಷದಿಂದ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗಿದೆ.
ಚಿಕ್ಕೋಡಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ ಮತ್ತು ಧಾರವಾಡ ಈ ಆರು ಲೋಕಸಭಾ ಕ್ಷೇತ್ರಗಳಿಗೆ ಆಸಕ್ತ ಆಕಾಂಕ್ಷಿಗಳು ತಮ್ಮ ಎಲ್ಲಾ ಮಾಹಿತಿಗಳೊಂದಿಗೆ ಈ ಕೂಡಲೇ http://prajaakeeya.org ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ ದಿನಾಂಕ 05.04.2024 ಆಗಿರುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ದಿನಾಂಕ 07.04.2024 ರಂದು ಪಕ್ಷದ ವತಿಯಿಂದ “ಬಿ ಫಾರಂ” ವಿತರಿಸಲಾಗುವುದು ಎಂದು ಪಕ್ಷ ತಿಳಿಸಿದೆ.

Author: Karnataka Files
Post Views: 6





