Download Our App

Follow us

Home » ರಾಜಕೀಯ » ತಡಕೋಡ ಮತ್ತು ಹೆಬ್ಬಳ್ಳಿಯಲ್ಲಿ ಕಾಂಗ್ರೇಸ್ ಅಬ್ಬರದ ಪ್ರಚಾರ

ತಡಕೋಡ ಮತ್ತು ಹೆಬ್ಬಳ್ಳಿಯಲ್ಲಿ ಕಾಂಗ್ರೇಸ್ ಅಬ್ಬರದ ಪ್ರಚಾರ

ಮತದಾನದ ದಿನಾಂಕ ಹತ್ತಿರ ಬರುತ್ತಿದ್ದಂತೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೇಸ್, ಅಬ್ಬರದ ಪ್ರಚಾರ ನಡೆಸಿತು. ಧಾರವಾಡ ತಾಲೂಕಿನ ತಡಕೋಡ ಹಾಗೂ ಹೆಬ್ಬಳ್ಳಿ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಿದ ಕಾಂಗ್ರೇಸ್ ಮುಖಂಡರು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲಿಸುವಂತೆ ಮನವಿ ಮಾಡಿದರು. 

ಶಾಸಕ ವಿನಯ ಕುಲಕರ್ಣಿ ಧರ್ಮಪತ್ನಿ ಶಿವಲೀಲಾ ಕುಲಕರ್ಣಿಯವರ ನೇತೃತ್ವದಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಪರ ಮತಯಾಚನೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಮಾಜಿ ಶಾಸಕ ಅಜಂಪೀರ ಖಾದ್ರಿ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಅನೀಲಕುಮಾರ ಪಾಟೀಲ, ಧಾರವಾಡ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಈಶ್ವರ ಶಿವಳ್ಳಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು. 

ತಡಕೋಡ ಹಾಗೂ ಹೆಬ್ಬಳ್ಳಿ ಗ್ರಾಮದಲ್ಲಿ ನಡೆದ ಕಾಂಗ್ರೇಸ್ ಬಹಿರಂಗ ಸಭೆಯಲ್ಲಿ 5 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದರು. ಈ ಸಲ ಕಾಂಗ್ರೇಸ್ ಗೆಲ್ಲಿಸಲು ಪ್ರತಿಜ್ಞೆ ಮಾಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!