Download Our App

Follow us

Home » ಕಾನೂನು » ಹಾಡುಹಗಲೇ ಗುಂಡಿನ ದಾಳಿ. ಇಬ್ಬರ ಸಾವು. ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿ ಹಂತಕರು ಪರಾರಿ

ಹಾಡುಹಗಲೇ ಗುಂಡಿನ ದಾಳಿ. ಇಬ್ಬರ ಸಾವು. ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿ ಹಂತಕರು ಪರಾರಿ

ಕರ್ನಾಟಕ ಮತ್ತೊಂದು ಕ್ರೂರ ಕೃತ್ಯಕ್ಕೆ ಸಾಕ್ಷಿಯಾಗಿದೆ. ಹಾಸನದಲ್ಲಿ ಹಾಡುಹಗಲೇ ಗುಂಡಿನ ದಾಳಿ ನಡೆದಿದೆ. ಕಾರಿನಲ್ಲಿ ಹೊರಟಿದ್ದವರನ್ನು ನಿಲ್ಲಿಸಿ ಮನಸೋ ಇಚ್ಛೆ ಗುಂಡು ಹಾರಿಸಲಾಗಿದೆ. 

ಗುಂಡಿಕ್ಕಿ ಇಬ್ಬರ ಹತ್ಯೆಗೈದ ಪಾತಕಿಗಳು ಪರಾರಿಯಾದ ಘಟನೆ ನಡೆದಿದೆ. ಕೆ ಆರ್ ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹೊಯ್ಸಳ ನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಬೆಚ್ಚಿ ಬೀಳಿಸಿದೆ. ಒಬ್ಬನ ಶವ ಹೊರಗೆ ಬಿದ್ದಿದ್ದರೆ, ಮತ್ತೊಬ್ಬನ ಶವ ಕಾರಿನಲ್ಲಿದೆ. 

ಸ್ಥಳಕ್ಕೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮೊಹಮ್ಮದ ಸುಜಿತಾ ಭೇಟಿ ನೀಡಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ತನಿಖೆ ಕೈಗೊಂಡಿದ್ದಾರೆ. ಆಸ್ತಿಯ ವಿಚಾರಕ್ಕೆ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಪೊಲೀಸ್ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಬೃಹತ್ ಪ್ರತಿಭಟನೆ ಇನ್ ಸೈಡ್ ಸ್ಟೋರಿ. ಓದಲೇಬೇಕಾದ ಸ್ಟೋರಿ.

ಪೊಲೀಸ್ ಪೇದೆ ನೇಮಕಾತಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ನಾಳೆ ಧಾರವಾಡದಲ್ಲಿ ವಿವಿಧ ಸಂಘಟನೆಗಳು ಕರೆ ಕೊಟ್ಟಿರುವ ಧಾರವಾಡ ಚಲೋ ಬೃಹತ್ ಪ್ರತಿಭಟನೆ ನಡೆಯಲಿದೆ. ಧಾರವಾಡ ವಿದ್ಯಾಕಾಶಿ ಎಂದು

Live Cricket

error: Content is protected !!